ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಥ ಬೀದಿಯಲ್ಲಿ ಭಕ್ತ ಸಾಗರ

 

ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಮಂಜೇಶ್ವರದ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ.


ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕ ಗಳು ದೇವಳದಲ್ಲಿ ನೆರವೇರಿದವು . ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿ ಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.
ಶನಿವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.

ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!