ಜನ ಮನದ ನಾಡಿ ಮಿಡಿತ

Advertisement

ಚಿನ್ನದ ಪದಕ ವಿಜೇತ ಪುತ್ತೂರಿನ ಕ್ರೀಡಾಪಟು ಕುಮಾರಿ ಜಿ.ಎಂ. ಕೀರ್ತಿ ಗೆ 

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.

 

ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!