ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ; ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ ಕುಂಬ್ಳೆ ಸಂಸ್ಮರಣ ಪ್ರಶಸ್ತಿ …!

ಮಂಗಳೂರು ; ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ (ರಿ) ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಕರಣ ವೇದಿಕೆ ಜಂಟಿಯಾಗಿ ಅಯೋಜಿಸುವ ಪ್ರತಿಷ್ಟಿತ ಕಾರ್ಯಕ್ರಮ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮ ಇದೇ ಬರುವ ಡಿಸೆಂಬರ್ 14 ಶನಿವಾರ ಸಂಜೆ 5 ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ಬಾವಿಯಿಂದ ಆರಂಭಗೊಂಡ ಈ ಪ್ರಶಸ್ತಿ 2013 ನೇ ಸಾಲಿನಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ಟರಿಗೆ ನೀಡಲಾಗಿತ್ತು .ಈ ಬಾರಿ ಹಿರಿಯ ಯಕ್ಷಗಾನ ಕಲಾವಿದರೂ ಮತ್ತು ಕುಬ್ಳೇಯವರ ಒಡನಾಡಿಯೂ ಆಗಿದ್ದ ಶೀ ಆರುವ ಗೊರಗಪ್ಪ ಶೆಟ್ಟರಿಗೆ ‘ಕುಂಬ್ಳೆ ಸಂಸ್ಮರಣ ಪ್ರಶಸ್ತಿ – 2024 ‘ ನೀಡಲಾಗುತ್ತದೆ. ಇದರಲ್ಲಿ 25000/- ನಗದು, ಸನ್ಮಾನ ಸ್ಮರಣಿಕೆ ಮುಂತಾದವು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಹಿರಿಯ ಯಕ್ಷಗಾನ ಅರ್ಥದಾರಿ ಮತ್ತು ವಿಮರ್ಶಕರಾದ ಭಾಸ್ಕರ ರೈ ಕುಕ್ಕುವಳ್ಳಿಯವರು ಕುಂಬ್ಳೆಯವರ ಸಂಸ್ಮರಣೆ ಮಾಡಲಿದ್ದಾರೆ. ಅಗರಿ ಎಂಟರ್ ಪ್ರೈಸಸ್ ನ ಮಾಲಕರಾದ ಅಗರಿ ರಾಘವೇಂದ್ರ ರಾವ್ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿಯವರು ಅತಿಥಿಗಳಾಗಿ ಬರಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ನಾ.ದಾಮೋದರ ಶೆಟ್ಟಿಯವರು ವಹಿಸಲಿದ್ದಾರೆಂದು ಹೇಳಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಹಿರಿಯ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಸುಧನ್ವ ಮೋಕ್ಷ’ ಎಂಬ ತಾಳಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ಹಿರಿಯ ಯಕ್ಷಗಾನ ಭಾಗವತರಾದ ದೀನೇಶ ಅಮ್ಮಣ್ಣಾಯ ,ಮದ್ದಳೆಯಲ್ಲಿ ಕೃಷ್ಣ ಪ್ರಕಾಶ ಉಳಿತ್ತಾಯ, ಮತ್ತು ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ ಸಹಕರಿಸಲಿದ್ದು ,ಮುಮ್ಮೇಳದಲ್ಲಿ ಡಾ.ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್ ,ವಾಸುದೇವ ರಂಗಾಭಟ್ ,ಮಧೂರು ಅರ್ಥ ಹೇಳಲಿದ್ದಾರೆಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಶಿರಾಜ್ ಶೆಟ್ಟಿ ಕಾವೂರು,ಕರುಣಾಕರ್ ಶೆಟ್ಟಿ, ನಾಗೇಶ್ ಶೆಟ್ಟಿ ಬಜಾಲ್ ,ಸತ್ಯನಾರಾಯಣ ಕೆ.ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!