ಜನ ಮನದ ನಾಡಿ ಮಿಡಿತ

Advertisement

ಸಂಘಟಕಿ ರೇಖಾ ಸುದೇಶ್ ರಾವ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ..!

ಕಾಸರಗೋಡು :ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.


ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025.ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದರು. ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ “2025ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವರಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!