ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.

ಮಂಗಳೂರು ಕಣ್ಣೂರು ಗಾಣದಬೆಟ್ಟು ನಿವಾಸಿ ಅಜರುದ್ದೀನ್ ಬಂಧಿತ ಆರೋಪಿ.
2009 ರಲ್ಲಿ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪತಿಪತ್ನಿ ಕಲಹದ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ಉಪವಿಭಾಗದ ಡಿವೈಎಸ್.ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್, ಮೂರ್ತಿ, ಲೋಲಕ್ಷ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಹರಿಶ್ಚಂದ್ರ, ಗಣೇಶ್ ಪ್ರಸಾದ್, ರಾಜೇಶ್ ಅವರ ತಂಡ ಪುತ್ತೂರು ತಾಲೂಕಿನ ಕೆಯ್ಯೂರು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



