ಜನ ಮನದ ನಾಡಿ ಮಿಡಿತ

Advertisement

ಒಂಟಿ ಮಹಿಳೆಯ ಸರ ಎಳೆದೊಯ್ದಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ ಬಚ್ಛೆ ಪೊಲೀಸರು..!

ಮಂಗಳೂರು; ತೆಂಕಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ.12ರಂದು ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಸರ ಎಳೆದೊಯ್ದಿದ್ದ ಪ್ರಕರಣದ ಆರೋಪಿಯನ್ನು ಬಚ್ಛೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್ (30) ಬಂಧಿತ ಆರೋಪಿ. ಈತನಿಂದ ಮಹಿಳೆಯ ಕುತ್ತಿಗೆಯಿಂದ ಎಳೆದೊಯ್ದಿದ್ದ 70 ಸಾವಿರ ರೂ. ಮೌಲ್ಯದ ಚಿನ್ನದ ಸರ, 50 ಸಾವಿರ ರೂ. ಮೌಲ್ಯದ ಸ್ಕೂಟರ್, 50 ಸಾವಿರ ರೂ. ಮೌಲ್ಯದ ಆಟೋ ರಿಕ್ಷಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆ, ಮೂಲ್ಕಿ ಬಜ್ಜೆ, ಉಪ್ಪಿನಂಗಡಿ, ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಒಟ್ಟು 10 ಸುಲಿಗೆ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಈತ 2 ತಿಂಗಳ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!