ಜನ ಮನದ ನಾಡಿ ಮಿಡಿತ

Advertisement

ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

 


ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!