ಜನ ಮನದ ನಾಡಿ ಮಿಡಿತ

Advertisement

ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

 


ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!