ಜನ ಮನದ ನಾಡಿ ಮಿಡಿತ

Advertisement

ಚಾಲಕನ‌ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು ರಾ.ಹೆ ಮಂಗಳೂರು ‌ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿ..!

ಬಂಟ್ವಾಳ: ಚಾಲಕನ‌ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ‌ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾಗಿದೆ.

 


ಬೆಂಗಳೂರಿನಿಂದ ಮಂಗಳೂರು ‌ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6.30 ರ ಅಂದಾಜಿಗೆ ಫರಂಗಿಪೇಟೆ ಜಂಕ್ಷನ್‌ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ.
ಟಿ.ಟಿ.ಯಲ್ಲಿ ಸುಮಾರು ‌10 ಮಂದಿ ಪ್ರಯಾಣಿಕರಿದ್ದು,ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
‌ಮಂಗಳೂರಿನಲ್ಲಿ ನಡೆಯುವ ಮದುವೆ ಕಾರ್ಯಕ್ರಮವೊಂದಕ್ಕೆ ಸ್ಟೇಜ್ ಡೆಕೋರೇಶನ್ ನ ಗುತ್ತಿಗೆ ವಹಿಸಿಕೊಂಡ ಬೆಂಗಳೂರಿನ ಇವೆಂಟ್ ನ ಮಾಲಕ ಡೆಕೋರೇಶನ್ ಸಾಮಾಗ್ರಿಗಳ ಜೊತೆ ಬರುತ್ತಿರುವ ವೇಳೆ ಘಟನೆ ‌ನಡೆದಿದೆ.
ಟಿ.ಟಿ.ಯಲ್ಲಿ ಪ್ತಯಾಣಿಸುತ್ತಿದ್ದವರ ಸರಿಯಾದ ಮಾಹಿತಿ ಲಭ್ಯವಾಗಿಲ್ಲ.
ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ‌ಕಳೆದು ಡಿವೈಡರ್ ನ ಮೇಲೆ ಹತ್ತಿ ಬಳಿಕ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಯಾವುದೇ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಕೋರೇಶನ್ ಸಾಮಾಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆಯಿಂದ ಕೆಲಹೊತ್ತು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು
ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!