ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಟೂರಿಸ್ಟ್ ಬೋಟ್ ಮಗುಚಿ ರೈಡರ್ ನಾಪತ್ತೆ; ಬೆಂಗಳೂರು ಪ್ರವಾಸಿಗನ ರಕ್ಷಣೆ

ಕುಂದಾಪುರ : ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿ ಬಿದ್ದ ಹಿನ್ನಲೆ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಕುಂದಾಪುರದ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್‌ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.

ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!