ಜನ ಮನದ ನಾಡಿ ಮಿಡಿತ

Advertisement

ಸಂಚಾರಿ ನಿಯಮಗಳನ್ನು ಜನರು ಚಾಚೂ ತಪ್ಪದೇ ಪಾಲಿಸಬೇಕು: ಪಿಎಸ್‌ಐ ರಾಮು

ಹನಗೋಡು: ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಜನರು ಚಾಚೂ ತಪ್ಪದೇ ಪಾಲಿಸಬೇಕು. ಇದರಿಂದ ಬಾರಿ ದಂಡ ಪಾವತಿ, ಹಾಗೂ ಅಮೂಲ್ಯವಾದ ಪ್ರಾಣ ಹಾನಿ ತಪ್ಪುತ್ತದೆ ಎಂದು ಪಿಎಸ್ಐ ರಾಮು ತಿಳಿಸಿದ್ದಾರೆ.

 

ಹನಗೋಡು ಮತ್ತು ಪಕ್ಕದ ಹಿಂಡಗುಡ್ಲುಗ್ರಾಮದಲ್ಲಿ ಸಂಚಾರಿ ನಿಯಮ ಪಾಲಿಸದೆ ಅಜಾಗರೂಕತೆ ಚಾಲನೆಯಿಂದ ಇತ್ತೀಚೆಗೆ ಎರಡು ಆಕ್ಸಿಡೆಂಟ್ ಗಳಾಗಿ ಇಬ್ಬರು ಮರಣ ಹೊಂದಿರುತ್ತಾರೆ. ಹುಣಸೂರು ಗ್ರಾಮಾಂತರ ಪೋಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ಕಾಯ್ದೆಗಳು ಜನ ಸಾಮಾನ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವುದು. ವಾಹನ ಚಾಲನೆ ಮಾಡುವಾಗ ಚಾಚೂ ತಪ್ಪದೆ ಹೆಲೈಟ್ ಹಾಗೂ ಸಂಚಾರಿ ನಿಯಮ ಪಾಲನೆ ಮಾಡಿದಲ್ಲಿ ಅಪಘಾತ ತಪ್ಪುವ ಜತೆಗೆ ದಂಡ ತೆರೆವುದು ಹಾಗೂ ಪ್ರಾಣ ಹಾನಿ ತಪ್ಪಿಸಬಹುದು. ನಿಯಮಗಳನ್ನು ಮೀರುತ್ತಿರುವುದು ಬಹುತೇಕ ಯುವಜನತೆ ವಿದ್ಯಾವಂತರೇ ಎನ್ನುತ್ತಿರುವುದು ನಿಜಕ್ಕೂ ವಿಷಾಧನೀಯ. ಈ ನಿಟ್ಟಿನಲ್ಲಿ ಇಲಾಖೆ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ
ಪಾಲಿಸಿ, ಹಾಗೂ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ , ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ನಿಷೇಧ ಇದ್ದರೂ ಪೋಷಕರು ಮಕ್ಕಳಿಗೆ ವಾಹನ ಕೊಡುವುದು ಇವೆಲ್ಲವೂ ಅನಾವುತಗಳಿಗೆ ಕಾರಣವಾಗುತ್ತವೆ ಹಾಗಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಎಎಸ್‌ಐ ಕೆ.ಬಿ.ಚಿನ್ನಸ್ವಾಮಿ ಇಮ್ರಾನ್ ಷರೀಫ್ ಮತ್ತು ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!