ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತೆರೆದ ಒಳಚರಂಡಿಯಿಂದ ದುರ್ವಾಸನೆ; ರೋಗಗಳ ಭೀತಿ..!

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.

ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!