ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಸಮವಸ್ತ್ರ ಹಾಗೂ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರ ವತಿಯಿಂದ ಶಾಲಾ ಮಕ್ಕಳಿಗೆ ಕೊಡಮಾಡಿದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 15-07-2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಿದ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹೊರ್ತಿ ಅಮಾಗೊಂಡ, ಆಡಳಿತ ಮಂಡಳಿಯ ಸದಸ್ಯರಾದ ಶಾರದೇಶ್ವರಿ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.





