ಜನ ಮನದ ನಾಡಿ ಮಿಡಿತ

Advertisement

ಮಡ್ಯಾರು ಡೆಕೋರೇಟರ್ಸ್‌ ಸಂಸ್ಥೆಯಲ್ಲಿಕಾರ್ಯನಿರ್ವಹಿಸುತ್ತಿದ್ದ 9 ಮಂದಿ ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ…!

ಉಳ್ಳಾಲ: ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ 9 ಮಂದಿಗೆ ಮಾಸ್ಕ್‌ ಧರಿಸಿದ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಕೋಟೆಕಾರು ಮಡ್ಯಾರ್‌ ಎಂಬಲ್ಲಿ ನಿನ್ನೆ ರಾತ್ರಿ ೮ ಗಂಟೆ ಸುಮಾರಿಗೆ ಸಂಭವಿಸಿದೆ.


ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ ನಡೆಸಲಾಗಿದ್ದು, ೭ ಮಂದಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನೋವಾ ಕಾರಿನಲ್ಲಿ ಬಂದ ೬ ಮಂದಿಯ ತಂಡ ಮಾಸ್ಕ್‌ ಧರಿಸಿ ಕೃತ್ಯವನ್ನು ಎಸಗಿದೆ.

ಆರೋಪಿಗಳು ಮರದ ಸೋಂಟೆಯಿಂದ ಕಾರ್ಮಿಕರೆಲ್ಲರಿಗೂ ಹಲ್ಲೆ ನಡೆಸಿದ ಪರಿಣಾಮ ೭ ಮಂದಿಯಲ್ಲಿ ಹಲವರ ಕಾಲು ಮುರಿತಕ್ಕೆ ಒಳಗಾಗಿದೆ. ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ ನಲ್ಲಿರುವ ಐರಿಸ್‌ ಡೆಕೊರೇಟರ್ಸ್‌ ಸಂಸ್ಥೆಯಿಂದ ೯ ಮಂದಿ ಕಾರ್ಮಿಕರು ಕೆಲ ತಿಂಗಳುಗಳ ಹಿಂದೆ ಕೆಲಸ ತ್ಯಜಿಸಿ ಮಡ್ಯಾರಿನಲ್ಲಿರುವ ಚಂದನ್‌ ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ದ್ವೇಷದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಗಾಯಾಳು ಕಾರ್ಮಿಕರು ಆರೋಪಿಸಿದ್ದಾರೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳೆಲ್ಲರೂ ಉಳ್ಳಾಲ ಪೊಲೀಸ್‌ ಠಾಣೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!