ಜನ ಮನದ ನಾಡಿ ಮಿಡಿತ

Advertisement

ಮಡ್ಯಾರು ಡೆಕೋರೇಟರ್ಸ್‌ ಸಂಸ್ಥೆಯಲ್ಲಿಕಾರ್ಯನಿರ್ವಹಿಸುತ್ತಿದ್ದ 9 ಮಂದಿ ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ…!

ಉಳ್ಳಾಲ: ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ 9 ಮಂದಿಗೆ ಮಾಸ್ಕ್‌ ಧರಿಸಿದ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಕೋಟೆಕಾರು ಮಡ್ಯಾರ್‌ ಎಂಬಲ್ಲಿ ನಿನ್ನೆ ರಾತ್ರಿ ೮ ಗಂಟೆ ಸುಮಾರಿಗೆ ಸಂಭವಿಸಿದೆ.


ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ ನಡೆಸಲಾಗಿದ್ದು, ೭ ಮಂದಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನೋವಾ ಕಾರಿನಲ್ಲಿ ಬಂದ ೬ ಮಂದಿಯ ತಂಡ ಮಾಸ್ಕ್‌ ಧರಿಸಿ ಕೃತ್ಯವನ್ನು ಎಸಗಿದೆ.

ಆರೋಪಿಗಳು ಮರದ ಸೋಂಟೆಯಿಂದ ಕಾರ್ಮಿಕರೆಲ್ಲರಿಗೂ ಹಲ್ಲೆ ನಡೆಸಿದ ಪರಿಣಾಮ ೭ ಮಂದಿಯಲ್ಲಿ ಹಲವರ ಕಾಲು ಮುರಿತಕ್ಕೆ ಒಳಗಾಗಿದೆ. ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ ನಲ್ಲಿರುವ ಐರಿಸ್‌ ಡೆಕೊರೇಟರ್ಸ್‌ ಸಂಸ್ಥೆಯಿಂದ ೯ ಮಂದಿ ಕಾರ್ಮಿಕರು ಕೆಲ ತಿಂಗಳುಗಳ ಹಿಂದೆ ಕೆಲಸ ತ್ಯಜಿಸಿ ಮಡ್ಯಾರಿನಲ್ಲಿರುವ ಚಂದನ್‌ ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ದ್ವೇಷದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಗಾಯಾಳು ಕಾರ್ಮಿಕರು ಆರೋಪಿಸಿದ್ದಾರೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳೆಲ್ಲರೂ ಉಳ್ಳಾಲ ಪೊಲೀಸ್‌ ಠಾಣೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!