ಜನ ಮನದ ನಾಡಿ ಮಿಡಿತ

Advertisement

ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಕಡಬತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಜ.10ರಂದು ಸಂಭವಿಸಿದೆ. ಕಡಬ ತಾಲೂಕು ಆಲಂಕಾರು ಗ್ರಾಮದ ಕಮ್ಮಿತ್ತಿಲು ದಯಾನಂದ ಗೌಡರ ಪತ್ನಿ ಪುಷ್ಪಾವತಿ (34ವ) ಮೃತಪಟ್ಟವರು. ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಇವರು ಬಳಿಕ ಐತ್ತೂರು ಹೊಸಕ್ಲು ತಾಯಿಯ ಮನೆಗೆ ಮೂರು ತಿಂಗಳ ಬಾಣಂತಿ ಆರೈಕೆಗೆ ಹೋಗಿದ್ದು ತಾಯಿ ಮಗು ಆರೋಗ್ಯವಾಗಿದ್ದರು ಎಂದು ಮನೆಯವರು ತಿಳಿಸಿದ್ದಾರೆ.

ಎರಡು ತಿಂಗಳು ಕಳೆದ ನಂತರ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂತಾನ ಹರಣ ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆ, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜ.10 ರಂದು ಕೊನೆಯುಸಿರೆಳೆದರು.

ಮೃತರು ಪತಿ ದಯಾನಂದ ಗೌಡ, ಪುತ್ರಿಯರಾದ ಎರಡು ತಿಂಗಳ ಹೆಣ್ಣು ಮಗು ಯಶ್ಚಿತಾ, ಗುಣಶ್ರೀ, ಹಂಶಿ, ರಿಷಿಕಾ ರವರನ್ನು ಅಗಲಿದ್ದಾರೆ.

ಈಸಾವಿಗೆ ಮತ್ತು ಮಕ್ಕಳ ಕಣ್ಣೀರಿಗೆ ಯಾರು ಹೊಣೆ: ಮೃತರ ಅಂತ್ಯ ಸಂಸ್ಕಾರದ ವೇಳೆ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ತಿಂಗಳ ಹಸುಗೂಸು ಹಾಗು ಮೂರು ಹೆಣ್ಣುಮಕ್ಕಳ ಕಣ್ಣೀರಿಗೆ ಕಾರಣರು ಯಾರು? ಎಂದು ನೆರೆದವರು ಪ್ರಶ್ನಿಸುತ್ತಿದ್ದರು. ಮೃತಪಟ್ಟ ಪುಷ್ಪಾವತಿಯವರಿಗೆ ಆರೋಗ್ಯದ ಸಮಸ್ಯೆ ಇತ್ತೇ ಎಂದು ಮುಂದಿನ ತನಿಖೆಯಲ್ಲಿ ಮ ಗೊತ್ತಾಗಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮೃತ ಪುಷ್ಪಾವತಿ ಅವರು ಕೃಷಿಕರಾಗಿದ್ದು, ಹೈನುಗಾರರಾಗಿದ್ದು, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!