ಜನ ಮನದ ನಾಡಿ ಮಿಡಿತ

Advertisement

ಕೋಟೆಕಾರು ಕೆ.ಸಿ.ರೋಡ್ ಶಾಖಾ ಬ್ಯಾಂಕ್ ನಿಂದ ಭಾರೀ ದರೋಡೆ; ಚಿನ್ನ ಹಣ ದೋಚಿದ ಆರು ಮಂದಿ ದರೋಡೆಕೋರರು

ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದಯ ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.

 


ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರ ವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!