ಜನ ಮನದ ನಾಡಿ ಮಿಡಿತ

Advertisement

ಜಯರಾಮ ಆರ್ತಿಲ ಸ್ಮರಣಾರ್ಥ ರಕ್ತದಾನ ಶಿಬಿರ

ಜೆಸಿಐ ಕಡಬ ಕದಂಬ ಇದರ ಆಶ್ರಯದಲ್ಲಿ ಜೆಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ , ಮಂಗಳೂರಿನ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಶಾಖೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ , ಮಂಗಳೂರುಇವುಗಳ ಸಹಯೋಗದಲ್ಲಿ ಕಡಬ ಜೆಸಿಐನ ಪೂವಾಧ್ಯಕ್ಷ ದಿ.ಜಯರಾಮ ಆರ್ತಿಲ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ರಕ್ತದಾನ ಶಿಬಿರ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

 


ಕಡಬ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನ ಜೀವ ಉಳಿಸುವಲ್ಲಿ ರಕ್ತ ಮಹತ್ತರ ಪಾತ್ರವಹಿಸುತ್ತದೆ, ಜಿಲ್ಲೆಯ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಜೆಸಿಐ ನಂತಹ ಸಂಘಟನೆಗಳು ಶ್ರಮಿಸುತ್ತಿವೆ, ಕಡಬದಲ್ಲಿ ಜೆಸಿಐ ನವರು ಅನೇಕ ವರ್ಷಗಳಿಂದ ನಮ್ಮ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ.. ರಕ್ತವನ್ನು ಯಾವುದೇ ರೀತಿಯಿಂದ ಉತ್ಪಾದನೆ ಮಾಡಲು ಸಾಧ್ಯವಿಲ್ಲ, ರಕ್ತದಾನ ಮಾಡುವ ಮೂಲಕವೇ ರಕ್ತ ಸಂಗ್ರಹಣೆ ಮಾಡಬೇಕಿದೆ, ಆರೋಗ್ಯವಂತ ಮನುಷ್ಯ ರಕ್ತದಾನ ಮಾಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ, ನಾವು ನೀಡಿದ ರಕ್ತ ನಮ್ಮ ದೇಹದಲ್ಲಿ ಶೀಘ್ರದಲ್ಲಿ ಮರು ಸಂಗ್ರ‍್ರಹಣೆಯಗುತ್ತದೆ. ಇವತ್ತು ವಿದ್ಯಾವಂತರಲ್ಲೂ ರಕ್ತದಾನ ಮಾಡುವುದರ ಬಗ್ಗೆ ತಪ್ಪು ತಿಳುವಳಿಕೆ ಇದೆ, ಈ ಸಂದೇಹಗಳನ್ನು ನಿವಾರಿಸುವಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ, ಯುವ ಜನತೆ ರಕ್ತದಾನ ಮಾಡಲು ಮುಂದೆ ಬರಬೇಕಿದೆ ಎಂದರು.
ಮಂಗಳೂರಿನ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ರಕ್ತನಿಧಿಯ ಸಂಯೋಜಕ ಪ್ರವೀಣ್ ಕುಮಾರ್ ಅತಿಥಿಯಾಗಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಅಭಾವ ಕಾಡುತ್ತಿದೆ, ನಾವು ರಕ್ತದಾನ ಮಾಡುವುದರೊಂದಿಗೆ ಇನ್ನೊಬ್ಬರು ರಕ್ತದಾನ ಮಾಡಲು ಪ್ರೇರಣೆ ನೀಡಬೇಕು, ಸಮಾಜದ ಯಾರೂ ಕೂಡಾ ರಕ್ತದ ಕೊರೆತಯಿಂದ ಸಾಯಬಾರದು, ಅದು ನಮ್ಮ ಕಟ್ಟಕಡೆಯ ನಿರ್ಧಾರ ಆಗಬೇಕು, ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು, ಯುವ ಜನತೆ ಮುತುವರ್ಜಿವಹಿಸಬೇಕು ಎಂದರು. ಜೆಸಿಐ ಕಡಬ ಕದಂಬ ಇದರ ಅಧ್ಯಕ್ಷೆ ವಿಶ್ರುತಾ ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ನಾಗರಾಜ್ ಎನ್.ಕೆ., ಜೆಸಿಐ ವಲಯ ನಿರ್ದೇಶಕ ಕಾಶಿನಾಥ್ ಗೋಗಟೆ, ಪೂವಾಧ್ಯಕ್ಷ ಝಾಫಿರ್ ಮಹಮ್ಮದ್, ನಿರ್ದೆಶಕ ಪ್ರೇಮ್‌ಜಿತ್ ಮಾರ್ಟಸ್ , ಗೀತಾ ಜಯರಾಮ ಆರ್ತಿಲ ಉಪಸ್ಥಿತರಿದ್ದರು.
ಜೆಸಿಐ ಕಡಬ ಕದಂಬದ ಪೂರ್ವಾಧ್ಯಕ್ಷ ಅಭಿಷೇಕ್ ಸ್ವಾಗತಿಸಿದರು. ಕಾರ್ಯದರ್ಶಿ ನವ್ಯ ಶ್ರೀಕೃಷ್ಣ ಮಾಣಿಪ್ಪಾಡಿ ವಂದಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!