ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಕ್ಷೇತ್ರದಲ್ಲಿ 5.27 ಕೋ.ರೂ.ಗಳಲ್ಲಿ ಬಹಳ ಬೇಡಿಕೆ ಇರುವ ಮೂರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ; ಸಂಸದ ಕ್ಯಾ| ಬ್ರಿಜೇಶ್ ಚೌಟ

ಬಂಟ್ವಾಳ: ಸಿಆರ್‌ಎಫ್ ನಿಧಿಯಿಂದ ದ.ಕ.ಲೋಕಸಭಾ ಕ್ಷೇತ್ರಕ್ಕೆ 42 ಕೋ.ರೂ. ಅನುದಾನ ಬಂದಿದ್ದು, ಅದರಲ್ಲಿ 6 ಕೋ.ರೂ.ಗಳನ್ನು ಬಂಟ್ವಾಳ ತಾಲೂಕಿಗೆ ನೀಡಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ 5.27 ಕೋ.ರೂ.ಗಳಲ್ಲಿ ಬಹಳ ಬೇಡಿಕೆ ಇರುವ ಮೂರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.

 


ಅವರು ಸಿಆರ್‌ಐಎಫ್ ನಿಧಿಯಿಂದ ಬಂಟ್ವಾಳದ ಮೂರು ರಸ್ತೆಗಳಿಗೆ ಸಾಲೆತ್ತೂರು, ಕಲ್ಲಡ್ಕ ಹಾಗೂ ಪಚ್ಚಿನಡ್ಕದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ ಪೊಳಲಿ-ಪಚ್ಚಿನಡ್ಕ ರಸ್ತೆಯ 3.33 ಕಿ.ಮೀ.ಗೆ 2 ಕೋ.ರೂ, ಕಲ್ಲಡ್ಕ-ವೀರಕಂಭ ರಸ್ತೆಯ 2.25 ಕಿ.ಮೀ.ಗೆ 1.35 ಕೋ.ರೂ. ಹಾಗೂ ಸಾಲೆತ್ತೂರು-ಕಟ್ಟತ್ತಿಲ ರಸ್ತೆಯ 3.2 ಕಿ.ಮೀ.ಗೆ 1.32 ಕೋ.ರೂ.ಗಳಲ್ಲಿ ಕಾಮಗಾರಿ ನಡೆಯಲಿದೆ. ಸಿಆರ್‌ಎಫ್‌ನಿಂದ ಮುಂದೆ ಇನ್ನೂ ಹೆಚ್ಚಿನ ಅನುದಾನಕ್ಕೆ ಮನವಿ ನೀಡಲಾಗಿದ್ದು, ಹೆಚ್ಚಿನ ಪ್ರಸ್ತಾವನೆ ನೀಡಿದರೆ ಅನುದಾನ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರವು ಯಾವುದೇ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗವನ್ನು ನೀಡಲಾಗಿದೆ ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ರಸ್ತೆ ಕಾಮಗಾರಿಗಳಿಗೆ ಅನುದಾನ ನೀಡುವುದು ಶಾಸಕರು, ಸಂಸದರ ಜವಾಬ್ದಾರಿಯಾದರೂ ಕಾಮಗಾರಿ ಸರಿಯಾಗಿ ನಡೆದಿದೆಯೇ ಎಂದು ಸ್ಥಳೀಯರು ಗಮನಹರಿಸಬೇಕು. ಎಂಜಿನಿಯರ್‌ಗಳು ಕೂಡ ಎಚ್ಚರಿಕೆ ವಹಿಸಿ ಗುತ್ತಿಗೆದಾರರು ಸಮರ್ಪಕವಾಗಿ ಕಾಮಗಾರತಿ ನಿರ್ವಹಿಸುವ ಕುರಿತು ನೋಡಿಕೊಳ್ಳಬೇಕು ಎಂದರು.
ವಿವಿಧ ಕಡೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಉಪಾಧ್ಯಕ್ಷರಾದ ಪುಷ್ಪರಾಜ್ ಚೌಟ, ರವೀಶ್ ಶೆಟ್ಟಿ ಕರ್ಕಳ, ಸಹಕಾರಿ ಪ್ರಕೋಷ್ಠದ ಅಧ್ಯಕ್ಷ ಜಯರಾಮ ರೈ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಒಬಿಸಿ ಮೋರ್ಚಾದ ಜಿಲ್ಲಾ ಮುಂದಾಳು ಮೋನಪ್ಪ ದೇವಸ್ಯ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯಕುಮಾರ್, ಶುಭ ಸಮೂಹದ ಮಾಲಕ ಭುವನೇಶ್ ಪಚ್ಚಿನಡ್ಕ, ಎಂಜಿನಿಯರ್ ಜೀತೇಂದ್ರ ಉಪಸ್ಥಿತರಿದ್ದರು.

ಮಾಧವ ಮಾವೆ ಸ್ವಾಗತಿಸಿದರು. ಶಶಿಧರ ರೈ ವಂದಿಸಿದರು. ರಾಜಾರಾಮ್ ಹೆಗ್ಡೆ, ಜಿನೇಂದ್ರ ಕೋಟ್ಯಾನ್, ಶೇಖರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!