ಜನ ಮನದ ನಾಡಿ ಮಿಡಿತ

Advertisement

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.


ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.

 


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್‌ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!