ಜನ ಮನದ ನಾಡಿ ಮಿಡಿತ

Advertisement

35 ಅರ್ಹ ವಿಕಲಾಂಗರಿಗೆ ಕೃತಕ ಅಂಗಗಳನ್ನು ವಿತರಿಸುವ ಕಾರ್ಯಕ್ರಮ

ಮಂಗಳೂರು : ಲಯನ್ಸ್ ಜಿಲ್ಲೆ 317D ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ಲಯನ್ಸ್ ಲಿಂಬ್ ಸೆಂಟರ್ ಸಹಯೋಗದಲ್ಲಿ 2024 – 25 ನೇ ಸಾಲಿನ ಲಯನ್ಸ್‌ ವರ್ಷದ ಲಯನ್ಸ್‌ ಜಿಲ್ಲಾ ಯೋಜನೆ ಅಡಿಯಲ್ಲಿ 35 ಅರ್ಹ ವಿಕಾಲಾಂಗರಿಗೆ ಕೃತಕ ಅಂಗಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ವಿಶೇಷ ಯೋಜನೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹ ವಿಕಲಾಂಗರಿಗೆ ಮೀಸಲಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶೀಘ್ರವೇ ವಿತರಿಸಲಾಗುವುದು, ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸುವ ಕಾರ್ಯ ಶುರುವಾಗಿದೆ ಎಂದು ಲಯನ್ಸ್ ಲಿಂಬ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಎಂ. ಶಾಂತರಾಮ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತದಲ್ಲಿ ಅಂಗವಿಕಲರಾಗಿರುವವರಿಗೆ ಕೃತಕ ಕಾಲಿನ ಜೋಡಣೆಯ ಪ್ರಕ್ರಿಯೆಯನ್ನು ನಡೆಸಲಾಗುವುದು . ಈ ರೀತಿಯ ಕೃತಕ ಕಾಲುಗಳು ಸಂಪೂರ್ಣ ಸ್ಟೀಲ್ ಲೋಹದಿಂದ ಮಾಡಲ್ಪಟ್ಟಿರುತಗತವೆ, ಒಂದು ಕೃತಕ ಕಾಲಿಗೆ ಅಂದಾಜು ೨. ೫ ಲಕ್ಷ ರೂ ವೆಚ್ಚ ತಗುಲುತ್ತದೆ . ಈ ವೆಚ್ಚವನ್ನು ಲಯನ್ಸ್ ಸಂಸ್ಥೆಯೇ ಖುದ್ದು ಭರಿಸಲಿದೆ ಎಂದರು. ಜೊತೆಗೆ ಯಾವ ರೀತಿಯಾಗಿ ನಡೆದಾಡ ಬೇಕು ಎನ್ನುವ ತರಬೇತಿಯನ್ನು ನಮ್ಮ ಸಂಸ್ಥೆಯವರು ನೀಡುತ್ತಾರೆ . ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮದಂತೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317 ಡಿ ಯ ಭಾರತಿ ಬಿ ಎಂ , ಸುರೇಶ್ ಶೆಟ್ಟಿ , ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!