ಜನ ಮನದ ನಾಡಿ ಮಿಡಿತ

Advertisement

ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್‌ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ

ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್‌ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ

ಮಂಗಳೂರು: ನಗರದ ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಮೊನ್ನೆ ಸಂಕ್ರಮಣ ದಿನದಂದು ನಡೆದ ದೈವರಾಧನೆಯ ಹೊತ್ತಲ್ಲಿ ಆಕ್ರೋಶ ಗರ್ಭಿತವಾಗಿ ನುಡಿದಿದೆ. ದೈವಗಳ ಆಚರಣೆ ಬಂದ್ ಮಾಡಿಸಲು ಮಂಗಳೂರು ವಿಶೇಷ ಆರ್ಥಿಕ ವಲಯ ಮುಂದಾಗಿದೆ. ಇದು ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಎಂಎಸ್‌ಇಝಡ್ ವ್ಯಾಪ್ತಿಯಲ್ಲಿರುವ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ತಡೆ ಆರೋಪ ಎದುರಾಗಿದೆ. 800 ವರ್ಷಗಳ ಇತಿಹಾಸವಿರುವ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಘಟನೆ ನಡೆದಿದೆ. 2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ ಕಳವಾರು ಗ್ರಾಮದ ಸಾವಿರಾರು ಎಕರೆ ಭೂ ಸ್ವಾಧೀನವಾಗಿದೆ. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ ಹೀಗೆ ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮಗೊಂಡಿದೆ. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿ ಗುತ್ತಿನ ದೇವಸ್ಥಾನ ಮುಟ್ಟಲಾಗಲಿಲ್ಲ. ನೆಲ್ಲಿದಡಿ ಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬಲಾತ್ಕಾರದಿಂದ ತನ್ನ ಹೆಸರಿಗೆ ಬರೆಸಿಕೊಂಡರೂ ದೈವಸ್ಥಾನ ಮಟ್ಟಲಾಗಲಿಲ್ಲ. ಸದ್ಯ ಕಂಪೆನಿ ಅಧಿಕಾರಿಗಳ ನಡೆಯ ವಿರುದ್ದ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!