ಜನ ಮನದ ನಾಡಿ ಮಿಡಿತ

Advertisement

ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್‌ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ

ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್‌ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ

ಮಂಗಳೂರು: ನಗರದ ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಮೊನ್ನೆ ಸಂಕ್ರಮಣ ದಿನದಂದು ನಡೆದ ದೈವರಾಧನೆಯ ಹೊತ್ತಲ್ಲಿ ಆಕ್ರೋಶ ಗರ್ಭಿತವಾಗಿ ನುಡಿದಿದೆ. ದೈವಗಳ ಆಚರಣೆ ಬಂದ್ ಮಾಡಿಸಲು ಮಂಗಳೂರು ವಿಶೇಷ ಆರ್ಥಿಕ ವಲಯ ಮುಂದಾಗಿದೆ. ಇದು ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಎಂಎಸ್‌ಇಝಡ್ ವ್ಯಾಪ್ತಿಯಲ್ಲಿರುವ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ತಡೆ ಆರೋಪ ಎದುರಾಗಿದೆ. 800 ವರ್ಷಗಳ ಇತಿಹಾಸವಿರುವ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಘಟನೆ ನಡೆದಿದೆ. 2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ ಕಳವಾರು ಗ್ರಾಮದ ಸಾವಿರಾರು ಎಕರೆ ಭೂ ಸ್ವಾಧೀನವಾಗಿದೆ. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ ಹೀಗೆ ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮಗೊಂಡಿದೆ. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿ ಗುತ್ತಿನ ದೇವಸ್ಥಾನ ಮುಟ್ಟಲಾಗಲಿಲ್ಲ. ನೆಲ್ಲಿದಡಿ ಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬಲಾತ್ಕಾರದಿಂದ ತನ್ನ ಹೆಸರಿಗೆ ಬರೆಸಿಕೊಂಡರೂ ದೈವಸ್ಥಾನ ಮಟ್ಟಲಾಗಲಿಲ್ಲ. ಸದ್ಯ ಕಂಪೆನಿ ಅಧಿಕಾರಿಗಳ ನಡೆಯ ವಿರುದ್ದ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!