ಜನ ಮನದ ನಾಡಿ ಮಿಡಿತ

Advertisement

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ :- ಶಾಸಕ ಕಾಮತ್

ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು” ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು.

 

ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್ ನಿಗಮಕ್ಕೆ ಈ ಬಾರಿಯೂ ಬಿಡಿಗಾಸು ನೀಡದೇ ಕರಾವಳಿ ಅಭಿವೃದ್ಧಿಯ ಪಾಲಿನ ನೀರಸ ಬಜೆಟ್ ಮಂಡಿಸಿದ್ದು ದುರದೃಷ್ಟಕರ ಎಂದರು.

ಸಿದ್ದರಾಮಯ್ಯನವರು ಕೇವಲ ತಮ್ಮ ದಾಖಲೆಯ ಸಲುವಾಗಿ ಈ ಬಜೆಟ್ ಮಂಡಿಸಿದ್ದು ಸ್ವತಃ ಅವರಲ್ಲೂ ಉತ್ಸಾಹ ಇರಲಿಲ್ಲ, ಅದೇ ರೀತಿಯಲ್ಲಿ ಆಡಳಿತ ಪಕ್ಷದ ನಾಯಕರಲ್ಲೂ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನಂತೂ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಶಾಸಕರು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!