ಜನ ಮನದ ನಾಡಿ ಮಿಡಿತ

Advertisement

ಮಾ.17ರಂದು ಸಾಲೆತ್ತೂರು ಸರಕಾರಿ ಶಾಲಾ ಬಳಿ ಗಣೇಶೋತ್ಸವ ಆಚರಣೆಗಾಗಿ ಖರೀದಿಸಿದ ಜಾಗದ ಶಿಲಾನ್ಯಾಸ

ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಳ್ನಾಡು ಸಾಲೆತ್ತೂರು ಇಂದು ಜಾಗವೊಂದನ್ನ ಖರೀದಿಸಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಹೌದು, ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು ಸರಕಾರಿ ಶಾಲಾ ಬಳಿ ಸಮಿತಿಯು ದಾನಿಗಳ ಸಹಕಾರದಿಂದ ಖರೀದಿಸಿದೆ. ಮಾ.17ರಂದು ಬೆಳಗ್ಗೆ 9.05ಕ್ಕೆ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅದೃಷ್ಟ ಚೀಟಿ ಡ್ರಾ ನಡೆಯಲಿದೆ. ಶಿಲಾನ್ಯಾಸವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಮುಂಬಯಿ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ನೇರವೇರಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ದೀಪಪ್ರಜ್ವಲನೆಗೈಯಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೀಲಿ ನಕಾಶೆ ಅನಾವರಣಗೊಳಿಸಿದ್ದು, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ಸಾಲೆತ್ತೂರು ಇದರ ಅಧ್ಯಕ್ಷರಾದ ಉದಯ್ ಕುಮಾರ್ ರೈ ಅಗರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 1ಗಂಟೆಗೆ ಅನ್ನದಾನ ನಡೆಯಲಿದೆ.

 

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!