ಜನ ಮನದ ನಾಡಿ ಮಿಡಿತ

Advertisement

ಮಾ.17ರಂದು ಸಾಲೆತ್ತೂರು ಸರಕಾರಿ ಶಾಲಾ ಬಳಿ ಗಣೇಶೋತ್ಸವ ಆಚರಣೆಗಾಗಿ ಖರೀದಿಸಿದ ಜಾಗದ ಶಿಲಾನ್ಯಾಸ

ಸತತ 30 ವರ್ಷಗಳಿಂದ ವಿಘ್ನನಿವಾರಕನಾದ ಗಣೇಶನ ಮೂರ್ತಿಯನ್ನು ಗಣೇಶೋತ್ಸವದಂದು ಸರಕಾರಿ ಶಾಲೆಯ ಸಭಾಂಗಣದಲ್ಲಿಟ್ಟು ಆರಾಧನೆ ಮಾಡಿಕೊಂಡು ಬರುತ್ತಿರುವ ಶ್ರೀ ಗಣೇಶ ಸೇವಾ ಟ್ರಸ್ಟ್(ರಿ.) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಳ್ನಾಡು ಸಾಲೆತ್ತೂರು ಇಂದು ಜಾಗವೊಂದನ್ನ ಖರೀದಿಸಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಹೌದು, ಹಿರಿಯರ ಕಾಲದಲ್ಲಿ ಸರಕಾರಿ ಶಾಲೆಯಲ್ಲಿ ಗಣೇಶನನ್ನು ಕೂರಿಸಿ ಅಲ್ಲಿ ಗಣಪನಿಗೆ ಚೌತಿಯಂದು ಆರಾಧನೆ ನಡೆಯುತ್ತಿತ್ತು. ಕಾಲ ಕ್ರಮೇಣ ಅದೇ ವಾಡಿಕೆ ಮುಂದುವರಿದಿದ್ದು, ಇದೀಗ ಸ್ವಂತ ಕಟ್ಟಡವನ್ನು ಸಾಲೆತ್ತೂರು ಸರಕಾರಿ ಶಾಲಾ ಬಳಿ ಸಮಿತಿಯು ದಾನಿಗಳ ಸಹಕಾರದಿಂದ ಖರೀದಿಸಿದೆ. ಮಾ.17ರಂದು ಬೆಳಗ್ಗೆ 9.05ಕ್ಕೆ ಸಭಾಂಗಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅದೃಷ್ಟ ಚೀಟಿ ಡ್ರಾ ನಡೆಯಲಿದೆ. ಶಿಲಾನ್ಯಾಸವನ್ನು ಹೇರಂಭ ಇಂಡಸ್ಟಿçÃಸ್ ಲಿಮಿಟೆಡ್ ಮುಂಬಯಿ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ನೇರವೇರಿಸಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಪ್ರಭಾಕರ ಭಟ್ ಕಲ್ಲಡ್ಕ ದೀಪಪ್ರಜ್ವಲನೆಗೈಯಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೀಲಿ ನಕಾಶೆ ಅನಾವರಣಗೊಳಿಸಿದ್ದು, ಶ್ರೀ ಗಣೇಶ ಸೇವಾ ಟ್ರಸ್ಟ್ (ರಿ.) ಸಾಲೆತ್ತೂರು ಇದರ ಅಧ್ಯಕ್ಷರಾದ ಉದಯ್ ಕುಮಾರ್ ರೈ ಅಗರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಕುಸಾಲ್ದ ಗುರಿಕಾರೆ ದಿನೇಶ್ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 1ಗಂಟೆಗೆ ಅನ್ನದಾನ ನಡೆಯಲಿದೆ.

 

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!