ಜನ ಮನದ ನಾಡಿ ಮಿಡಿತ

Advertisement

ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಬಜೆಟ್ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು; ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಪುತ್ತೂರು : ಪುತ್ತೂರಿಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರಾಗುವುದರಿಂದ ಅಲ್ಲಿ ಆರೋಗ್ಯ ಸವಲತ್ತುಗಳು ಹೆಚ್ಚಲಿವೆ. ಹಲವು ವರ್ಷಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟಿನಲ್ಲಿ ಆದ್ಯತೆ ದೊರೆತುದರಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರನ್ನು ಅಭಿಮಾನಿಗಳು, ಕಾರ್ಯಕರ್ತರು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ವೈದ್ಯಕೀಯ ಕಾಲೇಜು ಮತ್ತು ವಾಟರ್ ಮೆಟ್ರೋ ಯೋಜನೆಗಳನ್ನು ಹೊರತುಪಡಿಸಿದರೆ ಕರಾವಳಿಗೆ ಯಾವುದೇ ಆದ್ಯತೆ ಇಲ್ಲದ 2025-26 ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು ಇದನ್ನು ವಿಪಕ್ಷ ಬಿಜೆಪಿ ಹಲಾಲ್ ಬಜೆಟ್ ಎಂದು ಲೇವಡಿ ಮಾಡಿದೆ. ಎಸ್.ಸಿ., ಎಸ್.ಟಿ. ಮತ್ತು ಒ.ಬಿ.ಸಿ ವರ್ಗದವರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗಿದೆ ಮತ್ತು ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ. ಇದು ಅತಿಯಾದ ಓಲೈಕೆ ಎಂದು ಬಿಜೆಪಿ ಕೆಂಡ ಕಾರಿದೆ. ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಎಂದು ಅದು ಹೇಳಿದೆ. ಸುಮಾರು ಮೂರುವರೆ ಗಂಟೆ ಕಾಲ ಬಜೆಟ್ ಭಾಷಣ ಮಾಡಿದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಹದಿನಾರನೇ ಬಜೆಟ್. ಜೈ ಹಿಂದ್ , ಜೈ ಕರ್ನಾಟಕ ಎನ್ನುವ ಮೂಲಕ ಅವರು ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. . ಬಜೆಟಿನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಮೊತ್ತ ನೀಡಲಾಗಿದೆ. ಮೆಟ್ರೋ ವಿಸ್ತರಣೆ, ಸುರಂಗ ಮಾರ್ಗ ನಿರ್ಮಾಣ ಮೂಲಕ ಸಂಚಾರ ದಟ್ಟಣೆಯನ್ನು ನಿವಾರಿಸುವ ಕ್ರಮಗಳಿಗೆ ಬಜೆಟ್ ಆದ್ಯತೆ ನೀಡಿದೆ. ಪಂಚಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಇದ್ದ ಅನಿಶ್ಚಿತತೆ ನಿವಾರಣೆಯಾಗಿದೆ. ಅದಕ್ಕೆ ಅನುದಾನವನ್ನು ಬಜೆಟಿನಲ್ಲಿ ತೆಗೆದಿಡುವ ಮೂಲಕ ಮುಖ್ಯಮಂತ್ರಿಗಳು ಗ್ಯಾರಂಟಿಗಳು ಅಬಾಧಿತ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಬಾರಿಯ ಬಜೆಟಿನ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!