ಜನ ಮನದ ನಾಡಿ ಮಿಡಿತ

Advertisement

ಪಂಜ ಕೊಯಿಕುಡೆ ಶ್ರೀ ಶನಿಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜೆ, ಸಾಧಕರಿಗೆ ಸನ್ಮಾನ

ಮೂಲ್ಕಿ: ಪಂಜ ಕೊಯಿಕುಡೆ ಶ್ರೀ ಶನೈಶ್ಚರ ಮಂಡಳಿಯ ವಾರ್ಷಿಕ ಶನಿ ಪೂಜಾ ಮಹೋತ್ಸವವು ಮಾ.8ರ ಶನಿವಾರ ನಡೆಯಿತು.

 


ಪಂಜ ವಾಸುದೇವ ಭಟ್ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನೆರವೇರಿತು.ಶ್ರೇಷ್ಠ ಕಲಾವಿದರಾದ ಅಶೋಕ್ ಶೆಟ್ಟಿ ಸರಪಾಡಿ, ಕದ್ರಿ ನವನೀತ್ ಶೆಟ್ಟಿ, ಸೀತಾರಾಮ್ ಕುಮಾರ್ ಕಟೀಲ್, ಡಾ.ಪ್ರಖ್ಯಾತ್ ಶೆಟ್ಟಿ, ವಸಂತ ದೇವಾಡಿಗ ಇವರೆಲ್ಲರೂ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಶನೇಶ್ವರನ ಕತೆಯನ್ನು ಪ್ರದರ್ಶಿಸಿದ್ದಾರೆ.

 

ಶ್ರೀ ಜಾರಂದಾಯ ಮಹಿಳಾ ಮಂಡಳಿ ನವಜ್ಯೋತಿ ಮಹಿಳಾ ಮಂಡಳಿ ಪಂಜ ಹಾಗೂ ಪಂಜ ವಿಠೋಬಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು.ಮಧ್ಯಾಹ್ನ ಜಿಲ್ಲಾ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿ, ಕ್ರೀಡಾ ಪಟುಗಳಾದ ಪವಿತ್ರಾ, ಪ್ರತೀಕ್ಷಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅದೇ ರೀತಿ ಪ್ರಾಥಮಿಕ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.ಮಂಡಳಿಯ ಗೌರವಾಧ್ಯಕ್ಷ ವಾಸುದೇವ್ ಭಟ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ನಲ್ಯಗುತ್ತು ವಸಂತ ಶೆಟ್ಟಿ, ಬರ್ಕೆ ರಘುರಾಮ ಶೆಟ್ಟಿಮಂಡಳಿ ಅಧ್ಯಕ್ಷ ನವೀನ್ ಶೆಟ್ಟಿ ಪಾದೆಮನೆ,ಬಾಲಕೃಷ್ಣ ಮೊಯ್ಲಿ, ಸತೀಶ್ ಶೆಟ್ಟಿ ಪಂಜದಗುತ್ತುಸತೀಶ್ ಶೆಟ್ಟಿ ಬೈಲಗುತ್ತು,ಕೆಮ್ರಾಲ್ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಪಂಜ ಎಲ್ಲರೂ ಉಪಸ್ಥಿತರಿದ್ದರು. ಪಂಜ ವಾಸುದೇವ ಭಟ್ ಪ್ರಾರ್ಥಿಸಿದರು.ನಿತೇಶ್ ದೇವಾಡಿಗ ಸನ್ಮಾನ ಪತ್ರ ವಾಚಿಸಿದರು.ಭಾಸ್ಕರ ಶೆಟ್ಟಿ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!