ಜನ ಮನದ ನಾಡಿ ಮಿಡಿತ

Advertisement

ಕಡಬ :ಸ್ಕೂಟಿ ಹಾಗೂ ಬಸ್ಸು ಮಧ್ಯೆ ಅಪಘಾತ ಬೈಕ್ ಸವಾರ ಸಾವು…!

ಕಡಬ :ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (೨೪) ಎಂದು ಗುರುತಿಸಲಾಗಿದೆ.

 

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟಿ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾರೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿನ್ಯಾಸ್ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಇವರ ತಂದೆ ಇತ್ತೀಚೆಗಷ್ಟೆ ನಿಧನ ಹೊಂದಿದ್ದರು. ಮನೆಗೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದಾಗಿ ತಾಯಿ ಹಾಗೂ ಸಹೋದರಿ ಮಾತ್ರ ಇರುವ ಕುಟುಂಬ ಕಂಗಾಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!