ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಕೊಲೆ ಕುರಿತು ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!

ಸೌಜನ್ಯ ಕೊಲೆ ಕುರಿತು ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!

dharmastala #saujanya case #Sameer MD #FIR Archives - Udupixpress | ಉಡುಪಿ  Xpress

ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನಿಖಾ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿ 17 ವರ್ಷದ ಸೌಜನ್ಯಳನ್ನು 2012ರ ಅಕ್ಟೋಬರ್ 9 ರಂದು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿತ್ತು.

ಬಿಎನ್ಎಸ್ 2023ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅರ್ಜಿದಾರರಿಗೆ ಮಧ್ಯಂತರ ರಿಲೀಫ್ ನೀಡಿದ್ದಾರೆ.
ಸಮೀರ್ ತಮ್ಮ ಯೂಟ್ಯೂಬ್ ಚಾನೆಲ್ ಧೂತ: ಸಮೀರ್ ಎಂಡಿ’ ನಲ್ಲಿ “ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಇದು 18 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಈ ವೀಡಿಯೊ ಹೇಳಲಾಗಿದೆ. ವಿಶೇಷವಾಗಿ 2012ರ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೊದಲಿಗೆ ಸಂತೋಷ್ ರಾವ್ ನನ್ನು ಆರೋಪಿ ಎಂದು ಬಿಂಬಿಸಲಾಗಿತ್ತು. ನಂತರ ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿದ್ದು ಹಲವು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಮಾದರಿಗಳನ್ನು ವಿಡಿಯೋದಲ್ಲಿ ಹೇಳಲಾಗಿತ್ತು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ 2025ರ ಮಾರ್ಚ್ 5ರಂದು, ಕೌಲ್ ಬಜಾರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಸಮೀರ್ ಪರ ವಾದ ಮಂಡಿಸಿದ ವಕೀಲ ಎ ವೇಲನ್, ಎಫ್‌ಐಆರ್ ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಮತ್ತು ಅರ್ಜಿದಾರರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು.

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!