ಜನ ಮನದ ನಾಡಿ ಮಿಡಿತ

Advertisement

ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ ಕೆ.ಸದಾಶಿವ ಶೆಟ್ಟಿ ಮುಂದಾಳತ್ವದಲ್ಲಿ ಮಧೂರು ದೇವಾಲಯಕ್ಕೆ ಹೊಸ ಕಳೆ

ಕಾಸರಗೋಡು ಜಿಲ್ಲೆಯ ಮಧೂರು ದೇವಾಲಯ ಪ್ರಾಚೀನ ಪರಂಪರೆ ಮತ್ತು ಐತಿಹಾಸಿಕ ಮಹತ್ವದ ದೇವಾಲಯ. ಅದೀಗ ಜೀರ್ಣೋದ್ಧಾರಗೊಂಡು ಆಧುನಿಕತೆಯ ಸ್ಪರ್ಶ ಪಡೆದಿದೆ.

ಕಾಸರಗೋಡಿನವರೇ ಆದ ಕನ್ಯಾನ ಸದಾಶಿವ ಶೆಟ್ಟಿ ಅವರ ಮುಂದಾಳತ್ವದಲ್ಲಿ ದೇವಾಲಯದ ಗೋಪುರ ನವೀಕೃತಗೊಂಡು ದೇವಾಲಯಕ್ಕೆ ಹೊಸ ಕಳೆ ತಂದಿದೆ. ಮುಂಬಯಿಯಲ್ಲಿ ರಾಸಾಯನಿಕ ಉದ್ಯಮ ಮತ್ತು ಗುಜರಾತಿನಲ್ಲಿ ಔಷಧಿಗಳಲ್ಲಿ ಬಳಸುವ ರಾಸಾಯನಿಕಗಳ ತಯಾರಿಕಾ ಘಟಕಗಳನ್ನು ಹೊಂದಿರುವ ಕನ್ಯಾನ ಸದಾಶಿವ ಶೆಟ್ಟಿ ಅವರ ಉದ್ಯಮ ಸಂಸ್ಥೆಯ ಹೆಸರು ಹೇರಂಭಾ ಇಂಡಸ್ಟ್ರೀಸ್. ಗಣಪತಿಯ ಪರಮ ಭಕ್ತರಾಗಿರುವ ಅವರು ಸುಮಾರು ಒಂದೂವರೆ ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ದೇವಾಲಯದ ಚೆಲುವನ್ನು ಹೆಚ್ಚಿಸುವ ಪ್ರಧಾನ ಗೋಪುರವನ್ನು ನಿರ್ಮಿಸಿ ಮೂಡಪ್ಪ ಪ್ರಿಯ ಮಧೂರು ಗಣಪತಿಗೆ ಸಮರ್ಪಿಸುತ್ತಿದ್ದಾರೆ. ಪಾದುಕಾ ಮೂಲದಿಂದ ನಲವತ್ತು ಅಡಿ ಎತ್ತರವಿರುವ ಈ ಗೋಪುರ ಮೂರು ಅಂತಸ್ತುಗಳನ್ನು ಹೊಂದಿದೆ. ಗೋಪುರವು ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದೆ .ಮಧೂರು ದೇವಾಲಯದಲ್ಲಿ ಪೂಜಿಸುವ ಎಲ್ಲಾ ದೇವರ ವಿಗ್ರಹಗಳನ್ನು ಗೋಪುರದಲ್ಲಿ ನೆಲೆಗೊಳಿಸಲಾಗಿದೆ. ಕೃಷ್ಣ ಶಿಲೆಯಲ್ಲಿ ಕೆತ್ತಿದ ಶಿವ, ಗಣಪತಿ, ಪಾರ್ವತಿ ವಿಗ್ರಹಗಳು ಗೋಪುರಕ್ಕೆ ದೈವಿಕ ಕಳೆಯನ್ನು ನೀಡಿವೆ.

ಒಂಭತ್ತು ತಿಂಗಳುಗಳಲ್ಲಿ ಗೋಪುರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಗೋಪುರದ ವಾಸ್ತು ವಿನ್ಯಾಸವನ್ನು ಪ್ರಸಾದ್ ಮುನಿಯಂಗಳ ಅವರು ರೂಪಿಸಿದ್ದರೆ, ಶಿಲಾ ವಿನ್ಯಾಸದ ಹೊಣೆಗಾರಿಕೆ ಬಂಟ್ವಾಳದ ಸದಾಶಿವ ಶೆಣೈ ಅವರದ್ದು. ರಮೇಶ್ ಲಾಯಿಲ ಬೆಳ್ತಂಗಡಿ ಅವರ ನೇತೃತ್ವದ ನುರಿತ ಶಿಲ್ಪಿಗಳ ತಂಡ ಇದನ್ನು ಕಾರ್ಯರೂಪಕ್ಕೆ ತಂದಿದೆ. ವಾಸ್ತು ಜತೆ ದೈವಿಕ ಕಳೆಯ ಸಮ್ಮಿಲನ ಗೋಪುರವನ್ನು ಅಕರಶಃ ರಾಜಗೋಪುರವನ್ನಾಗಿಸಿದೆ. ಕೈ ಮುಗಿದು ಒಳಗೆ ಬಾ ಯಾತ್ರಿಕನೇ ಎನ್ನುತ್ತಿದೆ ಅದು.

 

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!