ಜನ ಮನದ ನಾಡಿ ಮಿಡಿತ

Advertisement

ಆಡಲು ಹೋದ ಮಕ್ಕಳಿಬ್ಬರು ಟ್ಯಾಂಕಿಗೆ ಬಿದ್ದು ಸಾವು

ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್‌ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.

ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.

ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!