ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆ

 

ಇಲ್ಲಿನ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್​ನಲ್ಲಿ ಹ್ಯಾಂಡ್ ಗ್ರನೇಡ್ ಸಿಕ್ಕಿದೆ.

ಹೋಟೆಲ್​ ಸಿಬ್ಬಂದಿಯೊಬ್ಬರು, ಆಧಾರ್​ ಕಾರ್ಡ್​ಗಾಗಿ ಅಬ್ದುಲ್ ರೆಹಮಾನ್​ನ ಬ್ಯಾಗ್​ ಪರಿಶೀಲಿಸಿದಾಗ ಗ್ರೇನೆಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್​ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪೀಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್​ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್​ ಚೆಕ್​ ಮಾಡಿದಾಗ ಹ್ಯಾಂಡ್ ಗ್ರನೇಡ್ ಕಂಡುಬಂದಿದೆ.

ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್​ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ಬೆಳ್ಳಳ್ಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳೊಡಿಸಿದ್ದಾರೆ.

ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್​ನಲ್ಲಿ ಸಪ್ಲೈಯರ್​​ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್​ನವರು ಆಧಾರ್ ಕಾರ್ಡ್ ಕೇಳಿದ್ದಾರೆ. ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್​​ ಕೊಟ್ಟಿಲ್ಲ. ಇದರಿಂದ ಹೋಟೆಲ್​ ಸಿಬ್ಬಂದಿಯೊಬ್ಬರು ಶೆಡ್​​ನಲ್ಲಿದ್ದ ರೆಹಮಾನ್​​ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!