ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆ

 

ಇಲ್ಲಿನ ಸಂಪೀಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್​ನಲ್ಲಿ ಹ್ಯಾಂಡ್ ಗ್ರನೇಡ್ ಸಿಕ್ಕಿದೆ.

ಹೋಟೆಲ್​ ಸಿಬ್ಬಂದಿಯೊಬ್ಬರು, ಆಧಾರ್​ ಕಾರ್ಡ್​ಗಾಗಿ ಅಬ್ದುಲ್ ರೆಹಮಾನ್​ನ ಬ್ಯಾಗ್​ ಪರಿಶೀಲಿಸಿದಾಗ ಗ್ರೇನೆಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್​ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪೀಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್​ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್​ ಚೆಕ್​ ಮಾಡಿದಾಗ ಹ್ಯಾಂಡ್ ಗ್ರನೇಡ್ ಕಂಡುಬಂದಿದೆ.

ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್​ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ಬೆಳ್ಳಳ್ಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳೊಡಿಸಿದ್ದಾರೆ.

ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್​ನಲ್ಲಿ ಸಪ್ಲೈಯರ್​​ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್​ನವರು ಆಧಾರ್ ಕಾರ್ಡ್ ಕೇಳಿದ್ದಾರೆ. ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್​​ ಕೊಟ್ಟಿಲ್ಲ. ಇದರಿಂದ ಹೋಟೆಲ್​ ಸಿಬ್ಬಂದಿಯೊಬ್ಬರು ಶೆಡ್​​ನಲ್ಲಿದ್ದ ರೆಹಮಾನ್​​ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!