ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್ ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಕ್ಕೆ ಅನ್ಯಾಯವಾದಾಗ ಖಾಸಗಿ ಬಸ್ ಮಾಲಕರು ಒಟ್ಟಿಗೆ ಇದ್ದೇವೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗುವುದರಿಂದ ಯಾವುದೇ ಖಾಸಗಿ ಬಸ್ ಗಳ ಬಂದ್ ಇರುವುದಿಲ್ಲ. ಎಲ್ಲ ಬಸ್ ಗಳು ಎಂದಿನಂತೆ ಓಡಾಡಲಿವೆ. ಬಂದ್ ಗೆ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದರು.



