ಜನ ಮನದ ನಾಡಿ ಮಿಡಿತ

Advertisement

ಶತ್ರುಸಂಹಾರ ಯಾಗ ನಡೆಸಿದ ದರ್ಶನ್

ಮಂಗಳೂರು: ಶತ್ರು ಸಂಹಾರ ಪೂಜೆಗೆ ಹೆಸರಾಗಿರುವ ಕೇರಳ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀಭಗವತಿ ದೇವಸ್ಥಾನಕ್ಕೆ ಶನಿವಾರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀತ್ ಸಮೇತ ಭೇಟಿ ನೀಡಿ ಶತ್ರುಸಂಹಾರ ಯಾಗ ನಡೆಸಿದರು.

ಶನಿವಾರ ಬೆಳಗ್ಗೆ ಸಂಗಡಿಗರ ಜೊತೆ ಎರಡು ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ದರ್ಶನ್ ಅವರು ಸಂಕಲ್ಪ ಕೈಗೊಂಡು ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಂಡರು.
ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ
ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅರ್ಚಕರು ದರ್ಶನ್, ಕುಟುಂಬಕ್ಕೆ ಕಪ್ಪು ಬಣ್ಣದ ತಾಯತ ನೀಡಿದ್ದು, ಅದನ್ನು ಧರಿಸಿದರೆ ಸ್ವರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ಇದೆ. ಇದಲ್ಲದೆ ದೃಷ್ಟಿ ನಿವಾರಣೆಗೆ ಅಘ ಹೆಸರಿನ ಪೂಜೆಯನ್ನೂ ದರ್ಶನ್ ನೆರವೇರಿಸಿದರು.
ಮಹಾಪೂಜೆ ವೇಳೆ ದರ್ಶನ್ ಮನಸ್ಸಿನಲ್ಲೇ ದೀರ್ಘ ಹೊತ್ತು ಪ್ರಾರ್ಥನೆ ಸಲ್ಲಿಸಿದರು. ಏನಾದರೂ ಸಮಸ್ಯೆಯಾಗಿದ್ದರೆ, ಅದನ್ನು ಮನಸ್ಸಿನಲ್ಲೇ ಹೇಳಿ ಪ್ರಾರ್ಥಿಸುವುದು ಇಲ್ಲಿನ ಕ್ರಮ. ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಈ ಕ್ಷೇತ್ರ ಪ್ರಾಮುಖ್ಯತೆ ಹೊಂದಿದೆ. ಯಾರ ವಿರುದ್ಧ ಅಥವಾ ಯಾರದೇ ವೈಯಕ್ತಿಕ ಹೆಸರೆತ್ತಿ ಇಲ್ಲಿ ಶತ್ರು ಸಂಹಾರ ಯಾಗ
ನಡೆಸುವುದಿಲ್ಲ. ಕೇವಲ ಮಾಟ, ಮಂತ್ರ, ಶತ್ರುಬಾಧೆ ನಿವಾರಣೆಗೆ ಮಾತ್ರ ಇಲ್ಲಿ ಯಾಗ ನಡೆಸಲಾಗುತ್ತದೆ. ಈ ದೇವಸ್ಧಾನಕ್ಕೆ ದರ್ಶನ್ ಆಗಮಿಸಿ ಸೇವೆ ಸಲ್ಲಿಸಿರುವ ಹಿಂದೆ ಅವರಿಗೆ ಮಾಟ, ಮಂತ್ರ, ಶತ್ರುಬಾಧೆಯ ಸಾಧ್ಯತೆಯನ್ನು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!