ಜನ ಮನದ ನಾಡಿ ಮಿಡಿತ

Advertisement

ಮಧೂರು ಬ್ರಹ್ಮಕಲಶೋತ್ಸವದ ಹಿನ್ನಲೆ; ಮಧೂರು ದೇವಾಲಯಕ್ಕೆ ಮ್ಯಾರಥಾನ್ ಓಟ

ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಅಂಗವಾಗಿ ಶ್ರೀ ಕದ್ರಿ ಮಂಜುನಾಥೇಶ್ವರ ದೇವಾಲಯದ ಆವರಣ ದಿಂದ ಮದೂರು ದೇವಾಲಯಕ್ಕೆ ಮ್ಯಾರಥಾನ್ ಓಟ ನಡೆಯಿತು.

ಮ್ಯಾರಥಾನ್ ಓಟವನ್ನು ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಉದ್ಘಾಟಿಸಿದರು. ಉದ್ಘಾಟಕರು ಮಾತಾಡಿ ಯುವ ಮನಸುಗಳು ಇಂದು ಹಾದಿ ತಪ್ಪುತ್ತಿದೆ. ಈ ಸಂದರ್ಭದಲ್ಲಿ ಇಂತಹ ಯುವಕರ ದೇವಾಲಯದ ಕಡೆಗಿನ ಮ್ಯಾರಥಾನ್ ಓಟವು ಇತರ ಯುವಕರಿಗೂ ಪ್ರೇರಣೆ ನೀಡುವಂತದ್ದು. ಇದು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಇನ್ನು ಮಧುರು ಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟ್ ಸದಸ್ಯರ ಮಾತನಾಡಿ ದಕ್ಷಿಣ ಕನ್ನಡಕ್ಕೂ ಕಾಸರಗೋಡಿಗೂ ಅವಿನಾಭಾವ ಸಂಬoಧವಿದೆ. ಇಲ್ಲಿನ ಕದ್ರಿ ದೇಗುಲಕ್ಕೆ ಅದರದ್ದೆ ಆದ ಐತಿಹ್ಯ ಇದೆ. ಹಾಗೆ ಇತಿಹಾಸ ಪ್ರಸಿದ್ಧ ಮದ್ದೂರು ದೇವಾಲಯಕ್ಕೆ ಇಲ್ಲಿನಿಂದಲೇ ಪ್ರಚಾರ ಸಿಗಬೇಕೆನ್ನುವುದು ನಮ್ಮೆಲ್ಲರ ಅಭಿಲಾಷೆ ಎಂದರು. ಮ್ಯಾರಥಾನ್ ಓಟಗಾರ ಮಾತಾಡಿ ನಮಗೆ ದೇಶ ಸೇವೆ ಮಾಡಬೇಕೆನ್ನುವ ಆಸೆ ಇದೆ. ಹಾಗಾಗಿ ಊರಿನಲ್ಲಿ ಓಟದ ಸ್ಪರ್ಧೆ ಆಗಾಗ್ಗೆ ಮಾಡುತ್ತಿದ್ದೆವು. ನಮ್ಮ ಹರಕೆ ಈಡೇರಲು ನಮ್ಮ ಮ್ಯಾರಥಾನ್ ದೇವಸ್ಥಾನದ ಕಡೆಗೆ ಸಾಗಲಿದೆ. ಭವಿಷ್ಯತ್ತಿನಲ್ಲಿ ಸೇನೆಗೆ ಸೇರುವ ಅಭಿಲಾಷೆ ಈಡೇರಿಸಲು ಗಣಪನಲ್ಲಿ ಬೇಡುವೆ ಎಂದರು. ಈ ಮ್ಯಾರಥಾನ್ ಉದ್ಘಾಟನೆಯಲ್ಲಿ ಮಧೂರು ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!