ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ:  ಮುತ್ತೂಟ್ ಫೈನಾನ್ಸ್ ದರೋಡೆಗೆ ಪ್ರಯತ್ನ – ಇಬ್ಬರು ಆರೋಪಿಗಳ ಬಂಧನ

ದೇರಳಕಟ್ಟೆಯಲ್ಲಿರುವ ಮತ್ತೂಟ್ ಫೈನಾನ್ಸ್ ದರೋಡೆಗೆತ್ನಿಸುತ್ತಿದ್ದಾಗಲೇ ಸೈರನ್ ಮೊಳಗಿದ ಪರಿಣಾಮ ಇಬ್ಬರು ಕೇರಳ ಮೂಲದ ದರೋಡೆಕೋರರು ಲಾಕ್ ಆದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕೇರಳ ರಾಜ್ಯದ ಕಾಂಞಂಗಾಡ್ ನಿವಾಸಿ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿ ಬಂಧಿತರಾದ ದರೋಡೆಕೋರರು.

ಶನಿವಾರ ತಡರಾತ್ರಿ ಸುಮಾರು 1.30 ಸುಮಾರಿಗೆ ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ಕಟ್ಟಡವೊಂದರ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್‌ಗೆ ಕೇರಳ ಮೂಲದ ಮೂವರು ದರೋಡೆಕೋರರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಮಳಿಗೆಯ ಬೀಗ ಒಡೆದು, ಸಿಸಿ ಕ್ಯಾಮರಾವನ್ನು ಒಡೆದು ಹಾಕಿದಾಗ ಸೈರನ್ ಮೊಳಗಿದೆ. ಇದು ಮುತ್ತೂಟ್ ಫೈನಾನ್ಸ್‌ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದಾರೆ. ಸ್ಥಳಕ್ಕೆ ಕೊಣಾಜೆ ಪೊಲೀಸರು ಧಾವಿಸಿದ್ದಾರೆ. ಈ ವೇಳೆ ಬೆದರಿದ ದರೋಡೆಕೋರರಲ್ಲಿ ಓರ್ವನು ಮೇಲಿನಿಂದ ಹಾರಿದಾಗ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ. ಮತ್ತೋರ್ವನು ಕಟ್ಟಡದಲ್ಲಿ ಅಡಗಿ ಕುಳಿತು ಸಿಕ್ಕಿಬಿದ್ದಿದ್ದಾನೆ. ಇನ್ನೋರ್ವನು ತಪ್ಪಿಸಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಗಳು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಜನವರಿ ತಿಂಗಳಲ್ಲಿ ಕೆ.ಸಿ.ರೋಡ್ ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ನಡೆಯಲಿದ್ದ ಸಂಭವನೀಯ ದರೋಡೆ ಪ್ರಕರಣವನ್ನು ಪೊಲೀಸರು ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!