ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕರ್ತವ್ಯ ಲೋಪ, ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು

ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾ‌ರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹೇಶ್ ಚಂದ್ರ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಾಗ ಬಡಾನಿಡಿಯೂರು ಗ್ರಾಮದಲ್ಲಿ ವಾಣಿಜ್ಯ ಉದ್ದೇಶದ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ಉದ್ಯಾನ ಮತ್ತು ಬಯಲು ಜಾಗದ ವಲಯದಿಂದ ವಾಣಿಜ್ಯ ವಲಯಕ್ಕೆ ಭೂ ಉಪಯೋಗ ಬದಲಾವಣೆಯ ಕಡತದಲ್ಲಿ ಸರ್ವೆ ನಕ್ಷೆ ಸೇರಿದಂತೆ ವಿವಿಧ ದಾಖಲೆಗಳನ್ನು ನಿಯಮ ಮೀರಿ ನಕಲಿಯಾಗಿ ಸೃಷ್ಟಿಸಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉಡುಪಿ ಶಾಸಕರು ಮನವಿ ಮಾಡಿದ್ದರು.

ಈ ವಿಚಾರಗಳ ಬಗ್ಗೆ ಸೂಕ್ತ ಸಮಜಾಯಿಷಿ ನೀಡುವಂತೆ ಮಹೇಶ್ ಚಂದ್ರ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಅದಕ್ಕೆ ತೃಪ್ತಿಕರವಾದ ಸಮಜಾಯಿಷಿ ಸಲ್ಲಿಕೆಯಾಗದೆ ಅವರು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿಯವರು ಮೇಲಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿರುವ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರನ್ನು ಸರಕಾರ ಮರು ನೇಮಕ ಮಾಡಿ ಆದೇಶ ಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!