ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : 2 ದಿನ ರಾಜ್ಯದಲ್ಲಿ ಭಾರೀ ಮಳೆ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

 

ಯುಗಾದಿ ಹಬ್ಬದ ದಿನವಾದ ಭಾನುವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಭಾನುವಾರ ಸಂಜೆ ಹುಬ್ಬಳ್ಳಿ ನಗರದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ತುಂಬಿ ಹರಿದವು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾರ್ಚ್ ಎರಡನೇ ವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ವಸಂತ ಮಳೆ ಆರಂಭವಾಗಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ಮಳೆಯಾಗಿದೆ. ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದ್ದು, ಈ ಬಾರಿ ಹಿಂಗಾರು ಮಳೆ ದುರ್ಬಲವಾಗಿರಬಹುದು ಎಂದು ಅಂದಾಜಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!