ಜನ ಮನದ ನಾಡಿ ಮಿಡಿತ

Advertisement

ಉತ್ತರ ಪ್ರದೇಶ : ಪ್ರಯಾಗ್‌ರಾಜ್‌ನಲ್ಲಿ ಮಲಗಿದ್ದ ವಾಯುಪಡೆ ಎಂಜಿನಿಯರ್‌ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಾಯುಪಡೆಯ ಸಿವಿಲ್ ಎಂಜಿನಿಯರ್‌ ಎಸ್‌.ಎನ್‌.ಮಿಶ್ರಾ(51) ಹತ್ಯೆಗೀಡಾದವರು.

 

ಪ್ರಯಾಗ್‌ರಾಜ್‌ನ ಕಂಟೋನ್ಮೆಂಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಿಶ್ರಾ ಮಲಗಿದ್ದಾಗ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಿಟಕಿಯಿಂದ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಅವರ ಎದೆಗೆ ಗುಂಡು ತಗುಲಿದೆ. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಎಸ್‌.ಎನ್‌.ಮಿಶ್ರಾ ಮೃತಪಟ್ಟಿದ್ದಾರೆ. ಎಂಜಿನಯರ್ಸ್‌ ಕಾಲೋನಿಯ ಗಡಿ ದಾಟಿ ವ್ಯಕ್ತಿಯೊಬ್ಬ ಬರುತ್ತಿರುವ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಗುಂಡು ಹಾರಿಸಿದವನ ಪತ್ತೆಗೆ ತನಿಖೆ ಮುಂದುವರೆಸಿದ್ದಾರೆ.

 

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!