ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ : ಬಾಲಕಿಯನ್ನು ಕೊಂದ ಆರೋಪಿ ಎನ್ಕೌಂಟರ್ ಗೆ ಬಲಿ

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್​ ಕುಮಾರ್​ ಮೃತ ಆರೋಪಿ. ಹುಬ್ಬಳ್ಳಿಯ  ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಆರೋಪಿ ರಿತೇಶ್​ ಕುಮಾರ್ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿ ಹೆತ್ತವರು ಕೂಲಿ ಕಾರ್ಮಿಕರಾಗಿದ್ದಾರೆ. ತಂದೆ ಪೇಂಟಿಂಗ್​ ಕೆಲಸ ಮಾಡುತ್ತಿದ್ದು, ತಾಯಿ ಮನೆಗೆಲಸ ಮಾಡುತ್ತಿದ್ದಾರೆ. ಮೃತ ಬಾಲಕಿಯ ತಾಯಿ ರವಿವಾರ ಮನೆಗೆಲಸಕ್ಕೆಂದು ವಿಜಯನಗರಕ್ಕೆ ಹೋಗಿದ್ದಾರೆ. ತಾಯಿ ಜೊತೆ ಬಾಲಕಿ ಕೂಡ ಹೋಗಿದ್ದಾಳೆ. ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಮನೆಯ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ, ಇಲ್ಲಿಗೆ ಬಂದ ಆರೋಪಿ ರಿತೇಶ್​ ಕುಮಾರ್ ಬಾಲಕಿಗೆ ಚಾಕೊಲೇಟ್​ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆಗ, ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿದೆ.

ಬಾಲಕಿ ಹತ್ಯೆ ಖಂಡಿಸಿ ಅಶೋಕನಗರ ಠಾಣೆ ಎದುರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ್ ಭೇಟಿ ನೀಡಿ ಬಾಲಕಿ ಪೋಷಕರಿಂದ ಮಾಹಿತಿ ಪಡೆದರು. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಆರೋಪಿಯನ್ನು ಬಂಧಿಸಲು ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದರು. ಆರೋಪಿ ಅಡಗಿರುವ ಸ್ಥಳದ ಮಾಹಿತಿ ತಿಳಿದ ಪೊಲೀಸರು ಆತನನ್ನು ಬಂಧಿಸಲು ತೆರಳಿದರು. ಈ ವೇಳೆ ಆರೋಪಿ ರಿತೇಶ್​ ಕುಮಾರ್ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಸಿದನು. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಪೊಲೀಸರು ಹಾರಿಸಿದ ಗುಂಡು ಆರೋಪಿ ರಿತೇಶ್​ ಕುಮಾರ್​ ಬೆನ್ನಿಗೆ ತಗುಲಿದೆ. ಕೂಡಲೆ, ಪೊಲೀಸರು ಆರೋಪಿ ರಿತೇಶ್​ ಕುಮಾರ್​​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ರಿತೇಶ್​ ಕುಮಾರ್​​ ​ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!