ಜನ ಮನದ ನಾಡಿ ಮಿಡಿತ

Advertisement

ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕಾಪು ಪುರಸಭೆಯ ಜನಾರ್ಧನ ವಾರ್ಡಿನ ವೈಟ್ & ವೈಟ್ ಬಸ್ ನಿಲ್ದಾಣದಿಂದ ಸಂಶುಧ್ಧಿನ್ ಮನೆ ವರೆಗೆ ರಸ್ತೆ ಅಭಿವೃದ್ಧಿ – 10 ಲಕ್ಷ, ಮಲ್ಲಾರು ಗರಡಿ ವಾರ್ಡಿನ ಕುಡ್ತಿಮಾರ್ ರಸ್ತೆ ಅಭಿವೃದ್ಧಿ – 15 ಲಕ್ಷ, ಮಲ್ಲಾರು ರೈಲ್ವೆ ಬ್ರಿಡ್ಜ್ ನಿಂದ ಎಸ್.ಎಸ್ ಲೇಔಟ್ ರಸ್ತೆ ಕಾಂಕ್ರೀಟಿಕರಣ – 5 ಲಕ್ಷ, ಭಾರತ್ ನಗರ ವಾರ್ಡಿನ ಕಾಲೋನಿಗಳಲ್ಲಿ ಚರಂಡಿ ಸಹಿತ ರಸ್ತೆ ಅಭಿವೃದ್ಧಿ – 40 ಲಕ್ಷ, ದಂಡತೀರ್ಥ ವಾರ್ಡಿನ ರಸ್ತೆ ಸಹಿತ ಚರಂಡಿ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಸದಸ್ಯರಾದ ಶೈಲೇಶ್ ಅಮೀನ್, ಉಮೇಶ್ ಕರ್ಕೇರ, ಅರುಣ್ ಶೆಟ್ಟಿ ಪಾದೂರು, ಸುರೇಶ್ ದೇವಾಡಿಗ, ಲತಾ ವಿಶ್ವನಾಥ್, ರತ್ನಾಕರ್ ಶೆಟ್ಟಿ ಹಾಗೂ ಗುತ್ತಿಗೆದಾರರು, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!