ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಬೆಂಗಳೂರಿನಲ್ಲಿ ಏಪ್ರಿಲ್ ೧೭ ರಂದು ಕಾಂಗ್ರೆಸ್ ಸರಕಾರದಿಂದ ಜನಾಕ್ರೋಶ ಧರಣಿ

ಸಿಎಂ ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ಕರ್ನಾಟಕದವರಿಗೆ ಸಾಕಷ್ಟು ಉಪಕಾರಿಯಾಗಿದೆ. ಕೇಂದ್ರ ಸರಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರ ಕಡಿಮೆ ಮಾಡಬೇಕು. ಇದನ್ನು ಏರಿಸಿದ ಕಾರಣವೇ ಇಂದು ಬೆಲೆ ಏರಿಕೆ ಸಂಭವಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ MLC ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂಧನ ದರವನ್ನು ಏರಿಸಿದ ಕೇಂದ್ರ ಸರಕಾರದ ವಿರುದ್ಧ ಜನಾಕ್ರೋಶ ಧರಣಿ ಮಾಡುವ ಬದಲು ರಾಜ್ಯ ಸರಕಾರದ ವಿರುದ್ಧ ಜನಾಕ್ರೋಶ ಧರಣಿಯನ್ನು ಮಾಡುತ್ತಾ ಇದ್ದೀರಿ. ಇಂದು ಬೆಲೆ ಏರಿಕೆ ಸಂಭವಿಸಿದರೆ ಅದಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ ಹೊರಬೇಕು. ಒಂದು ಲೀಟರ್ ಪೆಟ್ರೋಲ್ ಬೆಲೆಯ 60 ರೂ. ಸುಂಕ, ಡೀಸೆಲ್ ನ 47 ರೂ. ಸುಂಕ ನೇರವಾಗಿ ಕೇಂದ್ರ ಸರಕಾರಕ್ಕೆ ಹೋಗುತ್ತಿದೆ. ಇದನ್ನು ಮೊದಲು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಪರ ನೀತಿಯನ್ನು ಜಾರಿಗೆ ತರದೆ ರೈತ ವಿರೋಧಿ ಕಾನೂನನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿ ಬೆಂಗಳೂರಿನಲ್ಲಿ ಏಪ್ರಿಲ್ 17 ರಂದು ಜನಾಕ್ರೋಶ ಧರಣಿಯನ್ನು ಕಾಂಗ್ರೆಸ್ ಸರಕಾರ ಹಮ್ಮಿಕೊಂಡು ನಂತರ ಕರ್ನಾಟಕದಾದ್ಯಂತ ವಿಸ್ತರಣೆ ಮಾಡಲಾಗುವುದೆಂದು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!