ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : ಉಗ್ರರ ದಾಳಿ ಪ್ರಕರಣ; ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.

 

‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದೇ ವೇಳೆ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ₹1 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

‘ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!