ಜನ ಮನದ ನಾಡಿ ಮಿಡಿತ

Advertisement

ದೆಹಲಿ : ಪಾಕ್ ವಿರುದ್ಧ ಛಾಟಿ ಬೀಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.

ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.

 

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!