ಜನ ಮನದ ನಾಡಿ ಮಿಡಿತ

Advertisement

ದೆಹಲಿ : ಪಾಕ್ ವಿರುದ್ಧ ಛಾಟಿ ಬೀಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.

ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.

 

 

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!