ಜನ ಮನದ ನಾಡಿ ಮಿಡಿತ

Advertisement

ದೆಹಲಿ : ಪಾಕ್ ವಿರುದ್ಧ ಛಾಟಿ ಬೀಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.

ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.

 

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!