ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ಸ್ವಗ್ರಾಮಕ್ಕೆ ಮಂಜುನಾಥ ರಾವ್ ಪಾರ್ಥಿವ ಶರೀರ; ಕಂಬನಿ ಮಿಡಿದ ಶಿವಮೊಗ್ಗ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

 

ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್‍ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!