ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ, CPR ಮತ್ತು ಪ್ರಥಮ ಚಿಕಿತ್ಸೆ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್, ನಾಟೆಕಲ್, ಮಂಗಳೂರು ಸಹಯೋಗದಲ್ಲಿ ಆಯೋಜಿಸಲಾಯಿತು.

CPR ಕಾರ್ಡಿಯೋಪಲ್ಮನರಿ ರಿಸಸಿಟೇಷನ್ ಎಂದರೆ ಯಾರಾದರೊಬ್ಬರ ಹೃದಯ ಬಡಿತವು ನಿಂತಾಗ ತಕ್ಷಣವೇ ಮಾಡಬೇಕಾದ ತುರ್ತು ಚಿಕಿತ್ಸೆ ವಿಧಾನ. ಕಣಚೂರು ಮೆಡಿಕಲ್ ಸೈನ್ಸಸ್ ಸಂಸ್ಥೆ ಈ ರೀತಿಯ ಜೀವ ಉಳಿಸುವ ಕೌಶಲ್ಯಗಳ ಮಹತ್ವವನ್ನು ಎತ್ತಿ ಹಿಡಿಯುತ್ತದೆ.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಪಿ.ಎಲ್. ಧರ್ಮ ಅವರು ‘ಅಪಘಾತಗಳು ಎಲ್ಲೆಲ್ಲಿಯೂ ಸಂಭವಿಸಬಹುದು. ಆದರೆ ನಾವು ಮೂಲಭೂತ ಕೌಶಲ್ಯಗಳಲ್ಲಿ ತರಬೇತಿಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಲಿಂಗ ಅಥವಾ ಧರ್ಮದ ಆಲೋಚನೆಯೆಲ್ಲವನ್ನೂ ಮರೆತು, ಹೆಚ್ಚಿನದಾಗಿ ಸಾಧನೆ ಮತ್ತು ಸಮಾಜ ಸೇವೆಯಲ್ಲಿ ತೊಡಗಬೇಕೆಂದು ಪ್ರೇರಣೆ ನೀಡಿದರು.

ಬಳಿಕ ಮಾತನಾಡಿದ ಇನ್ನೋರ್ವ ಉದ್ಘಾಟನಾಕಾರ ಡಾ. ಜಯರಾಜ್ ಅಮಿನ್ ಅವರು ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡ ಕಣಚೂರು ಸಂಸ್ಥೆಗೆ ಧನ್ಯವಾದ ತಿಳಿಸಿ, ಪದವಿಧರರಿಗೆ ಸಮುದಾಯ ಆಧಾರಿತ ಅಗತ್ಯ ಕೌಶಲ್ಯ ಕಲಿಸುವ ಮಹತ್ವವನ್ನು ವಿವರಿಸಿದರು.

ಗಣ್ಯ ಅತಿಥಿಯಾಗಿ ಭಾಗವಹಿಸಿದ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೊನಿಸ್ ಅವರು ಜೀವ ರಕ್ಷಕ ಕೌಶಲ್ಯವನ್ನು ಕಲಿಸುವ ಮೂಲಕ ಮಂಗಳೂರು ವಿಶ್ವವಿದ್ಯಾಲಯದ ನೇತೃತ್ವ ತಂಡದ ಪ್ರಯತ್ನವನ್ನು ಶ್ಲಾಘಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವೈದ್ಯಕೀಯ ವಿಭಾಗದ ಡಾ. ಶ್ರೀನಿವಾಸ್ (JR III) ಮತ್ತು ಡಾ. ಉಬೇದುಲ್ಲಾ (JR I) ಅವರು ಸಿಪಿಆರ್ ಕೌಶಲ್ಯಗಳ ಪ್ರಾಯೋಗಿಕ ಪ್ರದರ್ಶನದೊಂದಿಗೆ ಮಾಹಿತಿ ಕಾರ್ಯಾಗಾರ ನಡೆಸಿದರು .

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!